Loading...

Loading...
ಕನ್ನಡದ ವಚನಕಾರರ ಪರಿಚಯLoading...

Loading...

Loading...
ಶೂನ್ಯಸಿಂಹಾಸನದ ಅಧ್ಯಕ್ಷ ಅಲ್ಲಮಪ್ರಭುLoading...
ಡಾ. ರವಿ ಹೆಚ್


ಅಲ್ಲಮಪ್ರಭು

ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವನು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದನು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದನು.
೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದಾನೆ. ಈತನು ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವನಾದರೂ, ಮನೆ ಬಿಟ್ಟು ತೆರಳಿ ಅಧ್ಯಾತ್ಮಸಾಧಕನಾದನೆಂದು ಹೇಳಲಾಗುತ್ತಿದೆ. ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷನಾಗುತ್ತಾನೆ. ಅಲ್ಲಮನ ವಚನಚಂದ್ರಿಕೆಯಲ್ಲಿ ೧೨೯೪ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯನಾದನೆಂದು ಪ್ರತೀತಿ. ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ 'ಗುಹೇಶ್ವರ' ಅಥವಾ 'ಗೊಹೇಶ್ವರ'. ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ. ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಅವನ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಅವನದು ಬಹುಮಟ್ಟಿಗೆ ರೂಪಕ ಭಾಷೆ. ಈ ಭಾಷೆ ಅವನ ವೈಶಿಷ್ಟ್ಯವೂ ಹೌದು. ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ.
೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದಾನೆ. ಈತನು ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವನಾದರೂ, ಮನೆ ಬಿಟ್ಟು ತೆರಳಿ ಅಧ್ಯಾತ್ಮಸಾಧಕನಾದನೆಂದು ಹೇಳಲಾಗುತ್ತಿದೆ. ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷನಾಗುತ್ತಾನೆ. ಅಲ್ಲಮನ ವಚನಚಂದ್ರಿಕೆಯಲ್ಲಿ ೧೨೯೪ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯನಾದನೆಂದು ಪ್ರತೀತಿ. ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ 'ಗುಹೇಶ್ವರ' ಅಥವಾ 'ಗೊಹೇಶ್ವರ'. ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ. ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಅವನ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಅವನದು ಬಹುಮಟ್ಟಿಗೆ ರೂಪಕ ಭಾಷೆ. ಈ ಭಾಷೆ ಅವನ ವೈಶಿಷ್ಟ್ಯವೂ ಹೌದು. ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ.

ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ. ಅಲ್ಲಮಪ್ರಭುವಿನ ಜೀವನ ಚರಿತ್ರೆ ಶಿವಮೊಗ್ಗೆ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು(೧೨ನೇ ಶತಮಾನ) ಎಂಟನೂರೈವತ್ತು ವರ್ಷಗಳಿಂದಲೂ ಇರುವ ಊರು. ಆಗಿನ ಬನವಾಸೆ-೧೨೦೦೦ ಎಂಬ ಪ್ರಾಂತ್ಯದ ಒಂದು ಹಳ್ಳಿ. ಇದೇ ಬಳ್ಳಿಗಾವೆಯ ಹತ್ತಿರವಿರುವ ಕೋಡಿಮಠ ಕಾಳಾಮುಖ ಶೈವರ ಪ್ರಮುಖ ಕೇಂದ್ರ. ಬಳ್ಳಿಗಾವೆಯೇ ಅಲ್ಲಮಪ್ರಭುವಿನ ಜನ್ಮಸ್ಥಳ. ಅಲ್ಲಮನ ಬಾಲ್ಯದ ದಿನಗಳ ಬಗ್ಗೆಯಾಗಲೀ ತಂದೆ-ತಾಯಿಗಳ ಬಗ್ಗೆಯಾಗಲೀ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಕೆಲವು ವೀರಶೈವ ಕಾವ್ಯಗಳಲ್ಲಿ ಅಲ್ಲಮನ ತಂದೆಯ ಹೆಸರು ನಿರಹಂಕಾರನೆಂಬುವವನು. ತಾಯಿ ಸುಜ್ಞಾನದೇವಿ. ನಿರಹಂಕಾರನು ಮೂಲತಃ ಕರುವೂರಿನವನು. ಬಳ್ಳಿಗಾವೆಗೆ ಬಂದು ಅಲ್ಲಿನ ರಾಜನ ಅರಮನೆಯಲ್ಲಿ ಅಂತಃಪುರದ ಅಧಿಕಾರಿಯಾಗಿದ್ದನು. ನಿರಹಂಕಾರ ಮತ್ತು ಸುಜ್ಞಾನದೇವಿಯರಿಬ್ಬರೂ ಶಿವಭಕ್ತರಾಗಿದ್ದರು."ನಮನ" ಅಲ್ಲಮನ ಜೀವನ ಚರಿತ್ರೆಯನ್ನು ನಿಖರವಾಗಿ ನಿರೂಪಿಸಲು ಸಾಧ್ಯವಾಗಲಾರದೊಷ್ಟು ಐತಿಹ್ಯಗಳು ಆ ವ್ಯಕ್ತಿತ್ವವನ್ನು ಸುತ್ತುವರಿದಿವೆ.

ಅಲ್ಲಮನ ಬಗ್ಗೆ ಹದಿಮೂರನೇ ಶತಮಾನದ ಹರಿಹರಮಹಾಕವಿಯು, ಪ್ರಭುದೇವರ ರಗಳೆಯಲ್ಲಿ ಸಾಕಷ್ಟು ವಿವರಣೆಗಳನ್ನು ನೀಡಿರುವನಾದರೂ, ಅಲ್ಲಮನ ಪ್ರಭಾವಲಯದಿಂದ ಪೂರ್ಣವಾಗಿ ಹೊರ ಬಂದು , ಒಂದು ಸಹಜ ಚಿತ್ರಣವನ್ನು ಕೊಡುವಲ್ಲಿ ಹರಿಹರನಂತಹ ವಾಸ್ತವವಾದಿ ಕವಿ ಸಹ ಸೋಲುತ್ತಾನೆನಿಸುತ್ತದೆ . ಇನ್ನು ಚಾಮರಸನು ಅಲ್ಲಮಪ್ರಭುದೇವನನ್ನು ಈ ಲೋಕದ ಮಾನವ ಚೇತನವೆಂದು ಒಪ್ಪಿಕೊಳ್ಳುವುದೇ ಇಲ್ಲ. ಅವನು ಕೈಲಾಸದಿಂದ ಬಂದ ಶಿವನ ಚಿತ್ಕಳೆ , ಎಂದೇ ಚಿತ್ರಿಸುತ್ತಾನೆ. ಇವರಿಬ್ಬರಲ್ಲದೆ ಎಳಂದೂರು ಹರಿಹರೇಶ್ವರನೆಂಬ ಮತ್ತೊಬ್ಬ ಕವಿಯೂ ಅಲ್ಲಮಪ್ರಭುವಿನ ಬಗ್ಗೆ ಕಾವ್ಯ ರಚನೆ ಮಾಡಿದ್ದಾನೆ . ಇನ್ನು ಚಾಮರಸನು ರಚಿಸಿರುವ ಪ್ರಭುಲಿಂಗಲೀಲೆಯು ತಮಿಳು, ಮರಾಠಿ ಮುಂತಾದ ಭಾಷೆಗಳಿಗೆ ಬಲು ಹಿಂದೆಯೇ ಅನುವಾದಗೊಂಡು ಪ್ರಖ್ಯಾತವಾಗಿದ್ದಿತು .ಈ ಮಹಾಕವಿಗಳಲ್ಲದೆ ,ಅಲ್ಲಮಪ್ರಭುವಿನ ಬಗ್ಗೆ ಪ್ರಾಸಂಗಿಕವಾಗಿ ಬರೆಯದ ವೀರಶೈವ ಸಾಹಿತ್ಯವೇ ಇಲ್ಲವೆನ್ನಬಹುದು. ಇದೆಲ್ಲಕ್ಕಿಂತಲೂ ಮುಖ್ಯವಾಗಿ, ಸ್ವತಃ ಅಲ್ಲಮಪ್ರಭುವೇ ಅತನ ಕಾಲದ ಬಲು ದೊಡ್ಡ ಸಾಹಿತ್ಯಚೇತನವಾಗಿದ್ದನೆನ್ನುವುದು, ಮತ್ತು ಅವನವೇ ಆದ ಅನೇಕ ವಚನಗಳು ಉಪಲಬ್ಧವಿರುವುದು ,ಅವನ ವ್ಯಕ್ತಿತ್ವವನ್ನು ಗ್ರಹಿಸಲು ತುಂಬಾ ಉಪಯುಕ್ತ ಮಾರ್ಗವಾಗಿದೆ .

ಇಡಿಯ ವಚನ ಸಾಹಿತ್ಯದಲ್ಲಿಯೇ , ಸಾಹಿತ್ಯದ ಪರಿಭಾಷೆಯನ್ನು ಸರಿಯಾದ ಮಾರ್ಗದಲ್ಲಿ ದುಡಿಸಿಕೊಂಡವರಲ್ಲಿ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಇಬ್ಬರೂ ಅಪ್ರತಿಮರು . ಚಾಮರಸನು ಅಲ್ಲಮನ ತಂದೆ ತಾಯಿಗಳನ್ನು ನಿರಹಂಕಾರ ,ಸುಜ್ಞಾನಿಗಳೆಂದು ಕರೆಯುತ್ತಾನೆ , ನಂತರ ಮಾಯಾದೇವಿಯ ತಂದೆತಾಯಿಗಳನ್ನು ಮಮಕಾರ, ಮೋಹಿನಿಯರೆಂದು ಕರೆಯುವುದನ್ನು ಕಂಡಾಗ ಇವೆಲ್ಲವೂ ವಾಸ್ತವವಲ್ಲದ , ಕವಿಯ ಭಾವನಾತ್ಮಕ ರೂಪಕಗಳೆನಿಸದೆ ಇರದು. ಹರಿಹರ ಮಹಾಕವಿಯು ಅಲ್ಲಮನ ತಂದೆತಾಯಿಗಳ ಹೆಸರುಗಳನ್ನೆ ಪ್ರಾಸ್ತಾಪಿಸದೆ ಅಲ್ಲಮನ ತಂದೆಯು ಬಳ್ಳಿಗಾವಿಯ ನಾಗವಾಸಾಧಿಪನಾಗಿದ್ದನೆಂದು ವಿವರಿಸುವನು. ನಾಗವಾಸಾಧಿಪನೆಂದರೆ ಅರಮನೆಯ ಅಂತಃಪುರದ ಸಂಗೀತ, ನರ್ತನಗಳ ವಲಯದ ಅಧಿಕಾರಿಯೆಂದೇ ಅರ್ಥ ಬರುವುದರಿಂದ ,ಅಲ್ಲಮನು ಒಬ್ಬ ಕಲಾವಿದನ ಮಗನಾಗಿದ್ದನೆಂದು ಭಾವಿಸಬಹುದು. ಮತ್ತು ಅಂದಿನ ಕಾಲಮಾನದಲ್ಲಿ ನಟರಿಗೆ, ನಟುವಾಂಗದ ವೃತ್ತಿಯವರಿಗೆ ಸಾಮಾಜಿಕ ಮನ್ನಣೆಯೂ ಇರಲಿಲ್ಲವೆಂಬುದು ಗಮನಾರ್ಹವಾದುದು . ಅಲ್ಲಮನ ಯವ್ವನಕಾಲದ ಪ್ರೇಮ, ಕಾಮ, ವ್ಯಾಮೋಹಗಳ ಚಿತ್ರಗಳನ್ನು ಹರಿಹರಮಹಾಕವಿಯೂ , ಚಾಮರಸನೂ ಕಟ್ಟಿ ಕೊಡುವ ರೀತಿಗಳು ತುಂಬಾ ವಿಭಿನ್ನವಾಗಿವೆ.

ಅತ್ಯಂತ ಸುಂದರನೂ , ಅಪ್ರತಿಮ ಮದ್ದಲಿಗನೂ, ಆಕರ್ಷಕಯುವಕನೂ ಆಗಿದ್ದ ಅಲ್ಲಮನನ್ನು ಶಿವದೇವಾಲಯದಲ್ಲಿ , ಮದ್ದಳೆ ಬಾರಿಸುತ್ತಿರುವ ಸಮಯದಲ್ಲಿ ಕಾಮಲತೆಯು ಆಕಸ್ಮಿಕವಾಗಿ ಸಂಧಿಸುತ್ತಾಳೆ. ಅವನನ್ನು ಕಂಡ ಕೂಡಲೇ ಅವನಲ್ಲಿ ಅನುರಕ್ತಳಾಗಿ ; ಕಾಮವಶಳಾಗಿ ಮೂರ್ಛಿತಳಾಗುತ್ತಾಳೆ. ಅಲ್ಲಮನ ಅವಸ್ಥೆಯೂ ಸಹ ಅದೇ ಪರಿಯಾಗುತ್ತದೆ .ಕಾಮಲತೆಯಂತಹ ಮಿಂಚಿನ ಮೋಹನಾಂಗಿಯನ್ನು ಕಂಡು,ಅಲ್ಲಮನು ವಿವಶನಾಗುತ್ತಾನೆ. ಇವರಿಬ್ಬ ಸ್ಥಿತಿಯನ್ನು ಮನಗಂಡ ಸಖಿಯರು ಇವರ ಮಿಲನಕ್ಕೆ ಅವಕಾಶ ಕಲ್ಪಿಸುತ್ತಾರೆ . ಅಲ್ಲಿಂದ ಅಲ್ಲಮ ಮತ್ತು ಕಾಮಲತೆಯರು ಇಹದ ಸಮಸ್ತವನ್ನೂ ಮರೆತು, ಏಕ ದೇಹಿಗಳಂತೆ,ಕಾಲ ದೇಶಾತೀತರಾಗಿ ,ಲೋಕದ ಮರವೆಯಲ್ಲಿ ಕಾಲ ಕಳೆಯುತ್ತಿರುವಾಗ ,ಕಾಮಲತೆಯು ಜ್ವರ ಪೀಡಿತೆಯಾಗಿ ಆಕಸ್ಮಿಕವಾಗಿ ಮರಣ ಹೊಂದುತ್ತಾಳೆ. ಇದರಿಂದ ವಿಚಲಿತನಾದ ಅಲ್ಲಮನು ವಿರಹ ಜ್ವಾಲೆಯಲ್ಲಿ ಬೇಯುತ್ತಾ, ಮರುಳನಂತೆ ಅಲೆಯುತ್ತಾ,ತಿರುಗುತ್ತಿರುವಾಗ . ಊರ ಹೊರಗೆ ಹೂತು ಹೋದ ಪ್ರಾಚೀನ ಶಿವಾಲಯವೊಂದರ ಶಿಖರದ ತುದಿಯು ,ಕಾಲಬೆರಳ ತುದಿಗೆ ತಗುಲಿ, ಕುತೂಹಲಗೊಂಡು ಅಗೆಯ ತೊಡಗಿದಾಗ ಇಡಿಯ ಶಿವಾಲಯ ಗೋಚರವಾಗುತ್ತದೆ. ಅದರೊಳಗೆ ಪ್ರವೇಶಿಸಿದಾಗ ಅಲ್ಲಿ ಶಿವಯೋಗದಲ್ಲಿದ್ದ ಅನಿಮಿಷ ದೇವನ ದರ್ಶನವಾಗಿ ,ಅವನ ಕೈಯ್ಯಲ್ಲಿದ್ದ ಅತ್ಮಲಿಂಗವು ಅಲ್ಲಮಪ್ರಭುವಿನ ಕೈಗೆ ಬಂದು ಸೇರುತ್ತದೆ .ಇದರಿಂದಾಗಿ ಇಬ್ಬರ ನಡುವೆ ಗುರು ಶಿಷ್ಯ ಸಂಭಂಧವೇರ್ಪಡುತ್ತದೆ. ತಕ್ಷಣ ಅನಿಮಿಷದೇವನು ಶಿವಾಧೀನನಾಗುತ್ತಾನೆ . ನಂತರ ಅಲ್ಲಮನ ಎಲ್ಲ ಮೋಹ ಮಮತೆಗಳು ಅಳಿದು , ಜಗತ್ತಿನ ನಶ್ವರತೆ; ವಿಶ್ವಕಾರಣದ ಶಾಶ್ವತತೆ ಅರಿವಿಗೆ ಬಂದು ಅನಂತ ಜ್ಞಾನಿಯಾಗುತ್ತಾನೆ. ಇದು ಹರಿಹರ ಮಹಾಕವಿಯು ಕಟ್ಟಿಕೊಡುವ ಅಲ್ಲಮನ ಪರಿವರ್ತನೆಯ ಚಿತ್ರಣ